ಸಾಲಿಗ್ರಾಮ: ಶ್ರೀ ಗುರುನರಸಿಂಹ ದೇವರಿಗೆ ಲಕ್ಷ ತುಳಸಿ ಅರ್ಚನೆ

ಕೋಟ(ಉಡುಪಿ ಟೈಮ್ಸ್ ವರದಿ): ಕೂಟ ಮಹಾಜಗತ್ತು ಸಾಲಿಗ್ರಾಮ ಈ ಸಂಸ್ಥೆಯ ವತಿಯಿಂದ ಸಾಲಿಗ್ರಾಮ ಶ್ರೀಗುರುನರಸಿಂಹ ದೇವರಿಗೆ ಲೋಕಕಲ್ಯಾಣಾರ್ಥವಾಗಿ ಹಾಗೂ ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಲಕ್ಷ ತುಳಸಿ ಅರ್ಚನೆ ಕಾರ್ಯಕ್ರಮ ಮಂಗಳವಾರ ನಡೆಯಿತು.
ನಿಗಮಾಗಮ ಪಾಠಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ನರಸಿಂಹ ಸಹಸ್ರ ನಾಮಾವಳಿ ಪಠಣ ಮಾಡಲಾಯಿತು, ಶ್ರೀ ಆಂಜನೇಯ ದೇವರಿಗೆ ರಂಗಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಂಗಸಂಸ್ಥೆಯ ಅಧ್ಯಕ್ಷ ಶ್ರೀಪತಿ ಅಧಿಕಾರಿ ,ಕಾರ್ಯದರ್ಶಿ ಮಹಾಬಲ ಹೇರಳೆ, ಖಜಾಂಚಿ ಪಿ ಸಿ ಹೊಳ್ಳ ಮತ್ತು ಕೇಂದ್ರ ಸಂಸ್ಥೆಯ ಉಪಾಧ್ಯಕ್ಷ ತಾರಾನಾಥ ಹೊಳ್ಳ ಸಂಕಲ್ಪ ಗೈದರು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಪಿ ಎಸ್ ಕಾರಂತ, ಕಾರ್ಯದರ್ಶಿ ಪಿಎಲ್ ತುಂಗಾ ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ಜಗದೀಶ್ ಕಾರಂತರ, ಕೇಂದ್ರೀಯ ಕಾರ್ಯದರ್ಶಿ ಮಂಜುನಾಥ ಉಪಾಧ್ಯ, ಉಪಸ್ಥಿತರಿದ್ದರು ಮಹಿಳಾ ವೇದಿಕೆ ಅಧ್ಯಕ್ಷೆ ಯಶೋಧ ಹೊಳ್ಳ ಮತ್ತು ಸದಸ್ಯರು ಸಹಕರಿಸಿದರು

ಕೂಟ ಮಹಾಜಗತ್ತು ಸಾಲಿಗ್ರಾಮ ಈ ಸಂಸ್ಥೆಯ ವತಿಯಿಂದ ಸಾಲಿಗ್ರಾಮ ಶ್ರೀಗುರುನರಸಿಂಹ ದೇವರಿಗೆ ಲೋಕಕಲ್ಯಾಣಾರ್ಥವಾಗಿ ಹಾಗೂ ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಲಕ್ಷ ತುಳಸಿ ಅರ್ಚನೆ ಕಾರ್ಯಕ್ರಮ ಮಂಗಳವಾರ ನಡೆಯಿತು.

Leave a Reply

Your email address will not be published. Required fields are marked *

error: Content is protected !!