ನಕ್ಸಲ್ ಚಟುವಟಿಕೆಯಲ್ಲಿ ಭಾಗಿ ಆರೋಪ- ತಂದೆ ಮತ್ತು ಮಗ ನಿರ್ದೋಷಿ ತೀರ್ಫು

ಮಂಗಳೂರು ಅ.21 : ನಕ್ಸಲ್ ಚಟುವಟಿಕೆಗಳಲ್ಲಿ ಸಂಬಂಧ ಹೊಂದಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ನಿರ್ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ನ್ಯಾಯಾಲಯ ಇಂದು ತೀರ್ಪು ನೀಡಿದೆ.

2012ರ ಮಾರ್ಚ್ 3ರಂದು ನಕ್ಸಲ್ ಚಟುವಟಿಕೆಗಳಲ್ಲಿ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ, ವಿಠಲ ಮಲೆಕುಡಿಯ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದಂತ ಮಂಗಳೂರಿನ 3ನೇ ಹೆಚ್ಚುವರಿ ನ್ಯಾಯಾಲಯವು, ಇಬ್ಬರು ನಿರ್ದೋಷಿಗಳೆಂಬುದಾಗಿ ಇಂದು ತೀರ್ಪು ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಈ ಪಟ್ಟಿಯಲ್ಲಿ 6 ನೇ ಆರೋಪಿಯಾಗಿ ವಿಠಲ ಮಲೆಕುಡಿಯ, 7ನೇ ಆರೋಪಿಯಾಗಿ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ಸೇರಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!