ಬಿ.ವೈ. ರಾಘವೇಂದ್ರ ಮತ್ತು ವಿಜಯೇಂದ್ರ ಹಣವೆಲ್ಲ ಸಿ.ಎಸ್.ಷಡಕ್ಷರಿ ಬಳಿ ಇದೆ: ಬೇಳೂರು ಹೊಸ ಬಾಂಬ್

ಶಿವಮೊಗ್ಗ ಅ.22 : ಸಂಸದ ಬಿ.ವೈ. ರಾಘವೇಂದ್ರ ಮತ್ತು ವಿಜಯೇಂದ್ರ ಅವರ ಹಣವೆಲ್ಲವೂ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಬಳಿ ಇದೆ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಅಷ್ಟೇ ಅಲ್ಲದೆ ಈ ಬಗ್ಗೆ ಮಾತನಾಡಿರುವ ಅವರು, ನೂರಾರು ಕೋಟಿ ರೂ. ಲೂಟಿ ಮಾಡಿರುವ ದುಡ್ಡು ಷಡಕ್ಷರಿ ಬಳಿ ಇದೆ. ಷಡಕ್ಷರಿ ಯಡಿಯೂರಪ್ಪ ಅವರ ಪಿಎ ಆಗಿದ್ದವರು. ಯಡಿಯೂರಪ್ಪ ಅವರ ವ್ಯವಹಾರವೆಲ್ಲವೂ ಅವರೇ ನೋಡಿಕೊಂಡಿದ್ದಾರೆ. ಯಡಿಯೂರಪ್ಪ ಅವರ ಪಿಎಗಳ ಮನೆಗಳನ್ನು ರೈಡ್ ಮಾಡಲಾಗಿದೆ. ಹಾಗೆಯೇ ಷಡಕ್ಷರಿ ಮನೆ ಮೇಲೆ ಕೂಡಾ ರೈಡ್ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಇದೇ ವೇಳೆ ನಳಿನ್ ಕುಮಾರ್ ಕಟೀಲ್ ಗೆ ಸೀರೆ ಉಡಿಸಿದರೆ, ಅವರು ಗಂಡಸೂ ಅಲ್ಲ, ಹೆಂಗಸೂ ಅಲ್ಲ ಎಂದಿರುವ ಅವರು, ಇಡೀ ಮಂಗಳೂರಿಗೆ ಬೆಂಕಿ ಹಚ್ಚುತ್ತೆನೆ ಎಂದಿದ್ದ ನಳಿನ್ ಕುಮಾರ್ ಕಟೀಲ್, ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸಿದ್ದರು. ಅವರದೇ ಪಕ್ಷದ ನಾಯಕರೆನ್ನಿಸಿಕೊಂಡವರು, ವಿಧಾನಸಭೆಯಲ್ಲಿ ಬ್ಲೂ ಫಿಲಂ ನೋಡಿದ್ದಾರೆ. ಬಿಜೆಪಿಯಲ್ಲೇ ಅತ್ಯಾಚಾರಿಗಳಿದ್ದಾರೆ. ಅವರೇ ಹಲವು ಸ್ಕ್ಯಾಂಡಲ್ ಗಳಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇವೆಲ್ಲದರ ಬಗ್ಗೆ ಗೊತ್ತಿರುವ ಕಟೀಲು ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು, ನಮ್ಮ ಕೇಂದ್ರ ನಾಯಕರ ಬಗ್ಗೆ ಟೀಕೆ ಮಾಡಲು ನೈತಿಕತೆ ಇಲ್ಲ ಎಂದಿದ್ದಾರೆ.

ಇನ್ನು ಜೆಡಿಎಸ್ ಮತ್ತು ಬಿಜೆಪಿ ಒಂದೇ ಎಂದಿರುವ ಅವರು, ಅವರ ಪಕ್ಷವೇ ಸರಿಯಾದ ರೀತಿಯಲ್ಲಿ ಇಲ್ಲ. ಅವರದೇ ಪಕ್ಷ ಸಂಘಟನೆ ಇಲ್ಲ. ಇವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ, ಕುಮಾರಸ್ವಾಮಿಯವರು ಬಹಳ ಎಚ್ಚರಿಕೆಯಿಂದ ಹೇಳಿಕೆ ನೀಡಲಿ. ಮುಸ್ಲಿಮರ ವೋಟು ಸೆಳೆಯಲು ಕುಮಾರಸ್ವಾಮಿ ಆರ್ ಎಸ್‍ಎಸ್ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಅವರು ಕಾಂಗ್ರೆಸ್ ಸೋಲಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!