ದೆಹಲಿ: ಹೆಚ್ಚುತ್ತಿರುವ ಕೋವಿಡ್ ಪ್ರಕರಣ ವೀಕೆಂಡ್‌ ಕರ್ಫ್ಯೂ ಜಾರಿ

ದೆಹಲಿ: ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೋವಿಡ್‌ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ಈ ಬಗ್ಗೆ ಮಾಹಿತಿ ಪ್ರಕಟಿಸಿದರು

ರಾಷ್ಟ್ರ ರಾಜಧಾನಿಯಲ್ಲಿ ವಾರಾಂತ್ಯದ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಸರ್ಕಾರಿ ಕಚೇರಿಗಳ ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಖಾಸಗಿ ಕಚೇರಿಗಳು ಶೇ 50ರ ಸಾಮರ್ಥ್ಯದಲ್ಲಿ ಕೆಲಸ ಮಾಡಬಹುದು. ಬಸ್‌ಗಳು ಮತ್ತು ಮೆಟ್ರೋ ಪೂರ್ಣ ಸಾಮರ್ಥ್ಯದಲ್ಲಿ ಚಲಿಸುತ್ತವೆ. ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರಲಿದೆ.

ಜನ ಭಯಭೀತರಾಗಬಾರದು ಎಂದು ಮನೀಶ್‌ ಸಿಸೋಡಿಯಾ ಜನರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ಒಮೈಕ್ರಾನ್‌ ಸೋಂಕಿನ ರೋಗ ಲಕ್ಷಣಗಳು ಸೌಮ್ಯವಾಗಿರಲಿವೆ ಎಂದೂ ಅವರು ಹೇಳಿದ್ದಾರೆ

Leave a Reply

Your email address will not be published. Required fields are marked *

error: Content is protected !!