ನ್ಯಾಯಾಲಯ ಆದೇಶಕ್ಕೆ ಎಲ್ಲರು ತಲೆಬಾಗಲೇಬೇಕು ಯಾವುದೇ ಕಪಾಳಮೋಕ್ಷ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು ಮಾ.15 : ‘ನ್ಯಾಯಾಲಯದ ಆದೇಶಕ್ಕೆ ಎಲ್ಲರೂ ತಲೆಬಾಗಲೇಬೇಕು, ಇದರಲ್ಲಿ ಯಾವುದೇ ಕಪಾಳಮೋಕ್ಷ ಇಲ್ಲ’ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಮಾಧ್ಯಮದ ವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರದಲ್ಲಿ ಯಾವುದೇ ಒಂದು ಪಕ್ಷ ಅಥವಾ ಗುಂಪಿನ ಗೆಲುವು ಇಲ್ಲ. ನ್ಯಾಯಾಲಯದ ಆದೇಶಕ್ಕೆ ಎಲ್ಲರೂ ತಲೆಬಾಗಲೇ ಬೇಕು, ಅನುಸರಿಸಬೇಕು. ಇದರಲ್ಲಿ ಯಾವುದೇ ಕಪಾಳಮೋಕ್ಷ ಇಲ್ಲ, ತೀರ್ಪಿನ ಕುರಿತು ಪೂರ್ಣ ಪಾಠ ನಾನು ಇನ್ನೂ ಓದಿಲ್ಲ, ಆದೇಶದ ಪ್ರತಿಯನ್ನು ಸಂಪೂರ್ಣ ನೋಡಿ ಪ್ರತಿಕ್ರಿಯಿಸುತ್ತೇನೆ’ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!