ಉಡುಪಿ:ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ

ಉಡುಪಿ ಮಾ.25 (ಉಡುಪಿ ಟೈಮ್ಸ್ ವರದಿ): ಮುಂದಿನ 5 ವರ್ಷಗಳ ಅವಧಿಗೆ ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಆಡಳಿತ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅದರಂತೆ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದು, ಉಪಾಧ್ಯಕ್ಷರಾಗಿ ಕೆ. ನಾಗೇಶ್ ಭಟ್ ಹಾಗೂ ಸಂಘದ ನಿರ್ದೇಶಕರಾಗಿ ಹರೀಶ್ ಹೆಗ್ಡೆ, ಲಕ್ಷ್ಮಣ್ ಜಿ. ನಾಯಕ್, ವಿಠಲ ಎಂ.ಪೈ, ಬಿ. ಅಶೋಕ್ ಪೈ, ಸುನೀಲ್ ಕುಮಾರ್ ಶೆಟ್ಟಿ, ಶಿವಪ್ರಸಾದ್ ಎಸ್. ಶೆಟ್ಟಿ, ಸುಧೀರ್, ಗಿರಿಜಾ ಎಸ್. ಶೆಟ್ಟಿ, ಪ್ರಫುಲ್ಲಾ ಎಚ್. ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!