2ನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪದಗ್ರಹಣ- ಪ್ರಧಾನಿ, ಪೇಜಾವರಶ್ರೀ ಸಹಿತ ಹಲವು ಗಣ್ಯರ ಉಪಸ್ಥಿತಿ

ಲಖನೌ: ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶುಕ್ರವಾರ ಪದಗ್ರಹಣ ಮಾಡಿದರು.

ಅಟಲ್ ಬಿಹಾರ ವಾಜಪೇಯಿ ಎಕನಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ  ಸಮ್ಮುಖದಲ್ಲಿ ಯೋಗಿ ಆದಿತ್ಯನಾಥ್ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

ಪ್ರಮಾಣ ವಚನ ಸಮಾರಂಭದಲ್ಲಿ ಪೇಜಾವರ ಶ್ರೀವಿಶ್ವ ಪ್ರಸನ್ನ ತೀರ್ಥರು ವಿಶೇಷ ಆಹ್ವಾನಿತರಲ್ಲಿ ಒಬ್ಬರಾಾಗಿ ಪಾಲ್ಗೊಂಡರು‌. ರಾಜ್ಯದಿಂದ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಇಸ್ಕಾನ್ ನ‌ ಮಧುಪಂಡಿತ ದಾಸ್  ಕೂಡಾ ಆಗಮಿಸಿದ್ದರು. ದೇಶಾದ್ಯಂತ ಅನೇಕ ನೂರಾರು ಸಾಧು ಸಂತರನ್ನು ಆಮಂತ್ರಿಸಲಾಗಿದ್ದು ಅವರ ಆತಿಥ್ಯಕ್ಕಾಗಿ ಹಿರಿಯ ಅಧಿಕಾರಿಗಳಾದ ಅವನೀಶ್ ಅವಸ್ಥಿ, ಆರ್ ಪಿ‌ ಸಿಂಗ್, ಅಶೋಕ್ ತಿವಾರಿ, ಆರ್ ಬಿಎಸ್ ರಾವತ್ ಮೊದಲಾದವರ ನೇತೃತ್ವದಲ್ಲಿ ಪ್ರತ್ಯೇಕ ತಂಡ  ರಚಿಸಿ ಸುವ್ಯವಸ್ಥೆಯ ಆಸ್ಥೆ ವಹಿಸಲಾಗಿತ್ತು. ಸಮಾರಂಭದಲ್ಲೂ ಮಠಾಧೀಶರು ಸ್ವಾಮೀಜಿಯವರಿಗೆ ಪ್ರತ್ಯೇಕ ಆಸನ ವ್ಯವಸ್ಥೆಗೊಳಿಸಲಾಗಿತ್ತು

ಉತ್ತರಪ್ರದೇಶದಲ್ಲಿ ಸಂಭ್ರಮ: ಯೋಗಿ ಮತ್ತೆ ಅಧಿಕಾರ ಸ್ವೀಕರಿಸುತ್ತಿರುವುದನ್ನು ಉತ್ತರ ಪ್ರದೇಶದ ಜನ ಸಂಭ್ರಮಿಸುತ್ತಿರುವುದು ಎಲ್ಲೆಲ್ಲೂ ಕಂಡು ಬಂತು . ರಸ್ತೆ ಇಕ್ಕೆಲಗಳಲ್ಲಿ , ವಿಮಾನ ನಿಲ್ದಾಣ ,ಬಸ್ ನಿಲ್ದಾಣ ಗಳಲ್ಲಿ ನೂರಾರು ನೃತ್ಯ ತಂಡಗಳ ನೃತ್ಯ ಪ್ರದರ್ಶನ ಬ್ಯಾಂಡ್ ಇತ್ಯಾದಿ ವಾದ್ಯಗಳನ್ನು ನುಡಿಸುತ್ತಾ ಸಂಭ್ರಮಿಸುತ್ತಿದ್ದರು

ಸ್ವಾಮೀಜಿಯವರನ್ನು ಕಾಡಿದ ಟ್ರಾಫಿಕ್ ಜಾಮ್ : ಲಕ್ನೋದಲ್ಲಿ ಶುಕ್ರವಾರ ಎಲ್ಲೆಂದರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು .ಲಕ್ಷಾಂತರ ಜನ ಸಮಾರಂಭಕ್ಕೆ ಆಗಮಿಸಿದ್ದರಿಂದ ಮತ್ತು ಮೋದಿ ಅಮಿತ್ ಶಾ ಸೇರಿದಂತೆ ಗಣ್ಯಾತಿಗಣ್ಯರ ದಂಡೇ ಆಗಮಿಸಿದ್ದರಿಂದ ಅವರ ಬೆಂಗಾವಲು ವಾಹನಗಳ ಸರತಿ ಸಾಲೇ  ಪ್ರಮುಖ ರಸ್ತೆಗಳಲ್ಲಿ  ಸೇರಿದ್ದರಿಂದ ಉಂಟಾದ ಟ್ರಾಫಿಕ್ ಜಾಮ್ ನಲ್ಲಿ ಅನೇಕರು ಸಿಲುಕಿದರು .ಸ್ಚತಃ ಪೇಜಾವರ ಶ್ರೀಗಳ ವಾಹನವೂ  ಸರತಿಯಲ್ಲಿ ಮುಂದೆ ಹೋಗದ ಪರಿಸ್ಥಿತಿ ಎದುರಾದಾಗ ಶ್ರೀಗಳು ವಾಹನದಿಂದ ಇಳಿದು ಸುಮಾರು ಎರಡು ಕಿ ಮೀ ನಡರದೇ ತೆರಳಿ ಸ್ಟೇಡಿಯಂ ತಲುಪಿದರು.‌

Leave a Reply

Your email address will not be published. Required fields are marked *

error: Content is protected !!