ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ- ಕಾರ್ಕಳದ ನಾಲ್ವರ ದಾರುಣ ಸಾವು

ಕಾರ್ಕಳ, ಅ.29: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಪ್ರಪಾತಕ್ಕೆ ಉರುಳಿ ನಾಲ್ವರು ಮೃತಪಟ್ಟ ಘಟನೆ ಇಂದು ಆಗುಂಬೆ ಘಾಟಿಯಲ್ಲಿ ನಡೆದಿದೆ.

ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು ಎನ್ನಲಾಗುತ್ತಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 9ನೇ ತಿರುವಿನಲ್ಲಿ ಘಟನೆ ನಡೆದಿದ್ದು, ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಗುಂಬೆ ಹಾಗೂ ಹೆಬ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!