ಹುಟ್ಟು ಹಬ್ಬ ಆಚರಿಸದಿರಲು:ಉಪ್ಪಿ ಮನವಿ

ಸೆಪ್ಟೆಂಬರ್ 18 ರಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಸಂಪ್ರದಾಯದಂತೆ ಅಭಿಮಾನಿಗಳು ಉಪ್ಪಿ ಮನೆ ಬಳಿ ಬಂದು, ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಂಭ್ರಮಿಸುತ್ತಾರೆ. ಆದರೆ ಈ ಸಂಪ್ರದಾಯಕ್ಕೆ ಉಪೇಂದ್ರ ಬ್ರೇಕ್ ಹಾಕಿದ್ದಾರೆ. ಹುಟ್ಟುಹಬ್ಬ ಆಚರಣೆಯಲ್ಲಿ ಆಡಂಬರ, ಅದ್ಧೂರಿತನಕ್ಕಿಂತ ಉತ್ತಮ ಸಂದೇಶ ಮುಖ್ಯ ಎಂಬ ಕಾರಣಕ್ಕೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಪ್ರೀತಿಯ ಅಭಿಮಾನಿಗಳಲ್ಲಿ ವಿನಂತಿ…‬
‪ಸೆಪ್ಟೆಂಬರ್ 18 “ಅಭಿಮಾನಿಗಳ ದಿನ”, ಅಂದು ದಯವಿಟ್ಟು ತಾವುಗಳು ಯಾರೂ ಕೇಕ್, ಹೂವಿನ ಹಾರ ಹೂಗುಚ್ಛ ಮತ್ತು ಉಡುಗೊರೆಗಳನ್ನು ತರಬೇಡಿ.. ತರಲೇ ಬೇಕು ಎಂದೆನಿಸಿದರೆ ಗಿಡಗಳನ್ನು ತನ್ನಿ. ಮುಂದೆ ಅದನ್ನು ಪೋಷಿಸುವ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ…‬
‪-ನಿಮ್ಮ ಉಪೇಂದ್ರ

Leave a Reply

Your email address will not be published. Required fields are marked *

error: Content is protected !!