ಬ್ರಹ್ಮಾವರ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬ್ರಹ್ಮಾವರ ಅ.21 (ಉಡುಪಿ ಟೈಮ್ಸ್ ವರದಿ): ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರದ ಹೇರೂರು ಗ್ರಾಮದಲ್ಲಿ ನಡೆದಿದೆ.

ಭರತ್ ಪೂಜಾರಿ (51) ಆತ್ಮಹತ್ಯೆ ಮಾಡಿಕೊಂಡವರು. ಇವರು ಪತ್ನಿಯ ಅಗಲಿಕೆ ಬಳಿಕ ಒಬ್ಬಂಟಿಯಾಗಿ ಮನೆಯಲ್ಲಿ ವಾಸವಾಗಿದ್ದರು. ಅ,20 ರಂದು ಬೆಳಿಗ್ಗೆ ಭರತ್ ಪೂಜಾರಿ ಅವರಿಗೆ ಎಂದಿನಂತೆ ಇವರ ತಂಗಿ ಭಾರತಿ ಪೂಜಾರಿ ಅವರು ಚಾ ತಿಂಡಿ ಕೊಟ್ಟು ವಾಪಾಸ್ಸು ಬಂದಿದ್ದರು. ಬಳಿಕ ಸಂಜೆ ಮತ್ತೆ ಹೋಗಿ ನೋಡಿದಾಗ ಭರತ್ ಪೂಜಾರಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಈ ಬಗ್ಗೆ ಭಾರತಿ ಪೂಜಾರಿ ನೀಡಿದ ಮಾಹಿತಿಯಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೆ ಪರಿಹಾರವಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ…
ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್.ಎಸ್.ಆರ್ ಸೆಕ್ಟರ್- 4, ಬೆಂಗಳೂರು

Leave a Reply

Your email address will not be published. Required fields are marked *

error: Content is protected !!