ಕಾರಿನಲ್ಲಿ ಹೋಗುತ್ತಿದ್ದ ವಿಡಿಯೋಗ್ರಾಫರ್ ಹೃದಯಾಘಾತದಲ್ಲಿ ಸಾವು

ಉಪ್ಪಿನಂಗಡಿ: ಸ್ನೇಹಿತರೊಂದಿಗೆ ಕಾರಿನಲ್ಲಿ ಉಪ್ಪಿನಂಗಡಿಗೆ ಹೋಗುತ್ತಿದ್ದ ವಿಡಿಯೋಗ್ರಾಫರ್‌ಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಮೃತ ವಿಡಿಯೋಗ್ರಾಫರ್ ಬಾಲಸುಬ್ರಮಣ್ಯ (೩೪) ಪುತ್ತೂರಿನ ಕಬಕ ಗ್ರಾಮದ ನಿವಾಸಿಯಾಗಿದ್ದು ಕಾರಿನಲ್ಲಿ ಪುತ್ತೂರಿನಿಂದ ಉಪ್ಪಿನಂಗಡಿಗೆ ಹೋಗುತ್ತಿದ್ದರೆಂದು ತಿಳಿದು ಬಂದಿದೆ.

ಕಳೆದ ಒಂದು ವರ್ಷದ ಹಿಂದೆಯಷ್ಟೆ ಬಾಲಸುಬ್ರಮಣ್ಯ ಮದುವೆ ಆಗಿದ್ದರೆಂದು ತಿಳಿದು ಬಂದಿದೆ. ಮೃತ ದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಇಡಲಾಗಿದ್ದು, ಉಪ್ಪಿನಂಗಡಿ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!