ಮಹಿಳೆಯ ಚಿನ್ನದ ಸರ ಕಿತ್ತು ಪರಾರಿಯಾದ ಆರೋಪಿ ಬಂಧನ

ಉಡುಪಿ: ಮಣಿಪಾಲ ಸಮೀಪದ ಮಂಚಿಕೋಡಿ ಬಳಿ ಗುರುವಾರ ಬೆಳಿಗ್ಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಯೊಬ್ಬ ಮಹಿಳೆಯೊಬ್ಬರ ಸರವನ್ನು ಕಿತ್ತು ಪರಾರಿಯಾಗಿದ್ದ ಪ್ರವೀಣ್ ನಾಯ್ಕ್ (32 ) ನನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಆತನ ಮನೆಯಿಂದ ಬಂಧಿಸಿ ಪೊಲೀಸರು 9000 ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿಲಾಗಿದೆ .
ಘಟನೆಯ ವಿವರ
ಬೆಳಿಗ್ಗೆ ಮಣಿಪಾಲ ಪ್ರೆಸ್‌ಗೆ ಕೆಲಸಕ್ಕೆ ಹೋಗುವಾಗ ಎದುರಿಗೆ ಬಂದ ಸರಗಳ್ಳ ಮಹಿಳೆಯನ್ನು ಸಮೀಪದ ಗದ್ದೆಗೆ ದೂಡಿ ಸರವನ್ನು ಕೀಳಲು ಮುಂದಾಗಿದ್ದಾನೆ. ಮಹಿಳೆ ಪ್ರತಿರೋಧ ತೋರಿದಾಗ ಸರ ತುಂಡಾಗಿದ್ದು, ಅರ್ಧ ಸರವನ್ನು ಕಿತ್ತು ಪರಾರಿಯಾಗಿದ್ದ.ಪ್ರಕರಣ ಮಣಿಪಾಲ ಠಾಣೆಯಲ್ಲಿ ದಾಖಲಾಗಿತ್ತು. ಪೋಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಆರೋಪಿ ಪ್ರವೀಣನನ್ನು ಬಂಧಿಸಿದ್ದು ಈ ಕಾರ್ಯಾಚರಣೆಯಲ್ಲಿ ಮಣಿಪಾಲ ಠಾಣಾಧಿಕಾರಿ ಶ್ರೀಧರ್ ನಂಬಿಯಾರ್ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *

error: Content is protected !!