ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕಾರ್ಯಾಗಾರ

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವೈದ್ಯಕೀಯ ಶಿಕ್ಷಣ ವಿಭಾಗದ ವತಿಯಿಂದ ವೈದ್ಯಕೀಯ ಸಿಬ್ಬಂದಿಗಳಿಗೆ ಮೂರು ದಿನದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ನಡೆಯಿತು.  ಭಾರತೀಯ ವೈದ್ಯಕೀಯ ಮಂಡಳಿಯ ವತಿಯಿಂದ ಕಾರ್ಯಾಗಾರದ ಮೇಲ್ವಿಚಾರಕರಾಗಿ ನಿಯೋಜನೆಗೊಂಡಿರುವ ಬೆಂಗಳೂರಿನ ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನ ನೇತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಎನ್.ಸುನಿತಾ ಅವರು ಭಾರತೀಯ ವೈದ್ಯಕೀಯ ಶಿಕ್ಷಣದ ಕಾರ್ಯ ವೈಖರಿ ಬಗ್ಗೆ ವಿವರಿಸಿದರು.

ಭಾರತೀಯ ವೈದ್ಯಕೀಯ ಮಂಡಳಿಯ ಶೈಕ್ಷಣಿಕ ವರ್ಷದಿಂದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಹೊಸ ಪಠ್ಯಕ್ರಮವನ್ನು ಅಳವಡಿಸಿದ್ದು, ಪ್ರತಿ ಕಾಲೇಜಿನ ಭೋದಕ ಸಿಬ್ಬಂದಿಗಳಿಗೆ ಅದರ ಅನುಷ್ಠಾನಕ್ಕಾಗಿ ತರಬೇತಿ ನೀಡಲಾಗಿದೆ. 

ಹೊಸ ಪಠ್ಯಕ್ರಮದ ವಿವಿಧ ವಿಭಾಗಗಳನ್ನು ಅಚ್ಚುಕಟ್ಟಾಗಿ ಅಳವಡಿಸಲು ಸಂಪನ್ಮೂಲ ಸಿಬ್ಬಂದಿಗಳು ಇತರ ಸಹದ್ಯೋಗಿಗಳಿಗೆ ತರಬೇತಿ ನೀಡಿದರು ಹಾಗೂ ಇದನ್ನು ಪಠ್ಯಕ್ರಮಕ್ಕೆ ಅಳವಡಿಸಲು ಸೂಚಿಸಿದರು.

ಶಿಬಿರಾರ್ಥಿಗಳು ತರಬೇತಿಯ ಮಹತ್ವವನ್ನು ಹಂಚಿಕೊಂಡರು. ಸಾಂಕೇತಿಕವಾಗಿ ಕಾಲೇಜಿನ ಆವರಣದಲ್ಲಿ ಗಿಡ ನೆಡಲಾಯಿತು.

Leave a Reply

Your email address will not be published. Required fields are marked *

error: Content is protected !!