ಬೈಂದೂರು: ಸುರಭಿ ಶೆಟ್ಟಿ 624 ಅಂಕ, ದ್ವಿತೀಯ ರ್‍ಯಾಂಕ್ ಗಳಿಕೆ


ಉಡುಪಿ (ಉಡುಪಿ ಟೈಮ್ಸ್ ವರದಿ ) ಎಸ್ ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಬೈಂದೂರು ವಲಯದ ನಾಗೂರಿನ ಸಂದೀಪನ್ ಪ್ರೌಢಶಾಲೆಯ ವಿದ್ಯಾರ್ಥಿನಿ ಸುರಭಿ ಎಸ್.ಶೆಟ್ಟಿ 624 ಅಂಕ ಪಡೆದು ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಉಪ್ಪುಂದ ನಿವಾಸಿಯಾಗಿರುವ ಸುರಭಿ ಎಸ್.ಶೆಟ್ಟಿ ಸುರೇಶ ಶೆಟ್ಟಿ ಮತ್ತು ಸೀಮಾ ಶೆಟ್ಟಿ ದಂಪತಿಗಳ ಪುತ್ರಿ. ಈ ಬಗ್ಗೆ ಸಂತೋಷ ಹಂಚಿಕೊಂಡಿರುವ ಸುರಭಿ ಶೆಟ್ಟಿ ತಾನು 625 ಅಂಕಗಳ ನಿರೀಕ್ಷೆಯಲ್ಲಿದ್ದೆ.

ಶಾಲೆಯಲ್ಲಿ ಶಿಕ್ಷಕರು ಮತ್ತು ಮನೆಯಲ್ಲಿ ಪೋಷಕರು ಉತ್ತಮ ಪ್ರೋತ್ಸಾಹ ನೀಡಿದ್ದಾರೆ. ನನಗೆ ಎಲ್ಲಾ ಪರೀಕ್ಷೆಗಳು ಸುಲಭ ಎನಿಸಿದವು. 625 ಅಂಕ ಪಡೆಯುವ ನಿರೀಕ್ಷೆಯಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಒಂದು ಅಂಕ ಕಡಿಮೆಯಾಗಿದೆ. ಮರು ಮೌಲ್ಯಮಾಪನಕ್ಕೆ ಹಾಕಲಿದ್ದೇನೆ. ಮುಂದೆ ಮಂಗಳೂರಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿ.ಯು ಶಿಕ್ಷಣ ಪಡೆದು ವೈದ್ಯಕೀಯ ಶಿಕ್ಷಣ ಪಡೆಯುವ ಆಸಕ್ತಿ ಹೊಂದಿದ್ದೇನೆ ಎನ್ನುತ್ತಾರ

Leave a Reply

Your email address will not be published. Required fields are marked *

error: Content is protected !!