ಉಡುಪಿ: ಮಾಜಿ ನಗರಸಭಾ ಸದಸ್ಯ ಪ್ರಶಾಂತ್ ಭಟ್ ಬಿಜೆಪಿಗೆ ಸೇರ್ಪಡೆ

ಉಡುಪಿ (ಉಡುಪಿ ಟೈಮ್ಸ್ ವರದಿ ) ಉಡುಪಿ ಮಾಜಿ ನಗರಸಭಾ ಸದಸ್ಯ ಪ್ರಶಾಂತ್ ಭಟ್ ಇಂದು ಬಿಜೆಪಿ ಗೆ ಅಧಿಕೃತವಾಗಿ ಸೇರ್ಪಡೆಯಾದರು. ಇವರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹಾಗೂ‌ ಶಾಸಕರಾದ ಕೆ ರಘುಪತಿ ಭಟ್ ಇವರು ಪಕ್ಷದ ಶಾಲು ಹಾಗೂ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.


ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಹರ ಕಲ್ಮಾಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಾಶ್ರಯ ಸಮಿತಿ ಸದಸ್ಯ ಡೆನಿಸ್ ಪರ್ಸನಾ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಕುಮಾರ್, ಪೆರಂಪಳ್ಳಿ ವಾರ್ಡ್ ಬೂತ್ ಅಧ್ಯಕ್ಷರುಗಳಾದ ಗಣಪತಿ ಭಟ್‌ ಮತ್ತು ರತ್ನಾಕರ ಸಾಲ್ಯಾನ್ ಹಾಗೂ ವಾರ್ಡ್ ನ ಪ್ರಮುಖರಾದ ಶಂಕರ್ ಕುಲಾಲ್, ಅರುಣಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ವಂದಿಸಿದರು. ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು..

Leave a Reply

Your email address will not be published. Required fields are marked *

error: Content is protected !!