ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿಯೂ ಯೋಗ ದಿನ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ೫ ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಆಚರಿಸಲಾಯಿತು. ಪತಂಜಲಿ ಯೋಗ ಸಮಿತಿ ಉಡುಪಿ ಜಿಲ್ಲೆ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ , ಶ್ರೀ ವಿವೇಕಾನಂದ ಜಿಲ್ಲಾ ಯೋಗ ಸ್ವಾಸ್ಥ್ಯ ಕೇಂದ್ರ ಉಡುಪಿ, ಸ್ವಾಮಿ ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಉಡುಪಿ, ಸಿದ್ಧ ಸಮಾಧಿಯೋಗ ಉಡುಪಿ, ಶ್ರೀ ಕೃಷ್ಣ ಯೋಗ ಕೇಂದ್ರ ಬ್ರಹ್ಮಗಿರಿ ಇವರು ಆಯೋಜಿಸಿರುವ ಯೋಗ ಕಾರ್ಯಕ್ರಮ.

ಈ ಸಂದರ್ಭ ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು, ಏಕಾದಶಿಯಂತಹ ಹರಿದಿನಗಳಲ್ಲಿ ಆಹಾರವನ್ನಾದರೂ ಬಿಡಬಹುದು, ಯೋಗವನ್ನು ಬಿಟ್ಟಂತಹ ದಿನ ನಮ್ಮ ಬದುಕಿನಲ್ಲಿ ಬಾರದಿರಲಿ.

ಯೋಗಾಸನವು ನಮ್ಮ ದಿನಚರಿಯ ಒಂದು ಭಾಗವಾಗಿರಲಿ.ಪತಂಜಲಿ ಸಂಸ್ಥೆಯವರು ಹರಿದ್ವಾರದಲ್ಲಿ ಯೋಗಕೇಂದ್ರವನ್ನು ಸ್ಥಾಪಿಸಿ ವಿಶ್ವದಲ್ಲಿ ಯೋಗವನ್ನು ಪಸರಿಸಿ, ಇಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸುತ್ತಿರುವುದು ಭಾರತೀಯರಿಗೆ ಹೆಮ್ಮೆಯ ಸಂಗತಿಯಾಗಿದೆ. ಇಂದು ರಾಜಾಂಗಣದಲ್ಲಿಯೂ ಯೋಗ ದಿನವನ್ನು ಹಬ್ಬದ ವಾತಾವರಣದಲ್ಲಿ ಸುಂದರವಾಗಿ ಆಚರಿಸಿದ್ದೀರಿ ನಿಮಗೆಲ್ಲ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹವಿರಲಿ ಎಂದರು.

ಇನ್ನೂ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ,ಮಠದ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ವತಿಯಿಂದ ಕೂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!